23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಲ್ಯಾಬ್‌ನಲ್ಲಿ ಹಾರ್ಮೋನ್ ಪರೀಕ್ಷೆ, ಬಂಜೆತನ ಪರೀಕ್ಷೆ ಮತ್ತು ಸೋಂಕು ರೋಗಗಳ ಪತ್ತೆಗಾಗಿ ಕೆಮಿಲುಮಿನೆಸೆನ್ಸ್ ಇಮ್ಯೂನೊಲಿಸೆ ಸಿಎಲ್-9೦೦ಐ ಎಂಬ ಅತ್ಯಾಧುನಿಕ ಯಂತ್ರವನ್ನು ಆ. 5ರಂದು ಅಳವಡಿಸಲಾಯಿತು.
ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಆಶಯದಂತೆ, ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಿತದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತದೆ. ಅವರ ನಿರ್ದೇಶನದಂತೆ ರೋಗಿಗಳಿಗೆ ಶೀಘ್ರವಾಗಿ ಮತ್ತು ನಿಖಿರವಾದ ವರದಿ ನೀಡಬಲ್ಲ ಅತ್ಯಾಧುನಿಕ ವೈದ್ಯಕೀಯ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಪ್ರಸ್ತುತ ಅಳವಡಿಸಿರುವ ಸಿಎಲ್-೯೦೦ಐ ಯಂತ್ರ ಅತ್ಯಂತ ಹೆಚ್ಚು ನಿಖರವಾಗಿ ಮತ್ತು ಅತೀ ಶೀಘ್ರವಾಗಿ ಫಲಿತಾಂಶ ನೀಡಬಲ್ಲದು.


ಇಲ್ಲಿ ಈಗಾಗಲೇ ಟೈಪ್-2 ಮಧುಮೇಹ ಪತ್ತೆ ಹಚ್ಚುವಲ್ಲಿ ಹೆಚ್ಚು ನಿಖರವಾದ ವರದಿ ನೀಡಬಲ್ಲ ಹೈಪಫಾರ್ಮೆನ್ಸ್ ಲಿಕ್ವಿಡ್ ಕ್ರೊಮ್ಯಾಟೋಗ್ರಫಿ ಯಂತ್ರವನ್ನು ಅಳವಡಿಸಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್‌ಪಿಎಲ್‌ಸಿ ವಿಧಾನದ ಮೂಲಕ ಟೈಪ್-೨ ಮಧುಮೇಹ ಪತ್ತೆ ಹಚ್ಚಲು ಸಾಧ್ಯವಾಗುವ ಏಕೈಕ ಆಸ್ಪತ್ರೆ ಇದಾಗಿದೆ ಎಂದು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ವರದಿ: ನಾರಾಯಣ. ಬಿ

Related posts

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!