September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ ಆ. 11 ರಂದು ಶಾರದಾ ಮಂಟಪ ಉಜಿರೆಯಲ್ಲಿ‌ ನಡೆಯಿತು.


ವಿಶ್ವ ಹಿಂದೂ ಪರಿಷದ್ ನ ಷಷ್ಠಿ ಪೂರ್ತಿ ಕಾರ್ಯಕ್ರಮವು ಸೆ.01 ರಂದು ನಿಗದಿ ಪಡಿಸಿದ್ದು ಈ ಕಾರ್ಯಕ್ರಮದ ಯಶಸ್ವಿಗಾಗಿ ವಿವಿಧ ಸಂಘಟನೆಯ ಪ್ರಮುಖರನ್ನು ಸೇರಿಸಿ ತೀರ್ಮಾಣಿಸಲಾಯಿತು.


ಈ ಸಮಾಲೋಚನಾ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾನ್ಯ ಸಂಘ ಚಾಲಕರು ವಿನಯ ಚಂದ್ರ ಉಜಿರೆ ವಿ.ಹಿಂ.ಪ. ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ,ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಸುಬ್ರಹ್ಮಣ್ಯ ಅಗರ್ತ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ನ್ಯಾಯವಾದಿಗಳು, ಮೋಹನ್ ಬೆಳ್ತಂಗಡಿ ಕಾರ್ಯದರ್ಶಿ ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡ, ಸಂತೋಷ್ ಅತ್ತಾಜೆ ಸಂಯೋಜಕರು ಬಜರಂಗದಳ ಬೆಳ್ತಂಗಡಿ ಪ್ರಖಂಡ, ರಮೇಶ್ ಧರ್ಮಸ್ಥಳ ವಿ.ಹಿಂ.ಪ. ಗೋರಕ್ಷಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಅನಂತು ಉಜಿರೆ ಗೋ ರಕ್ಷಾ ಪ್ರಮುಖ್ ಬಜರಂಗದಳ ಬೆಳ್ತಂಗಡಿ ಪ್ರಖಂಡ, ನಾಗೇಶ್ ಕಲ್ಮಂಜ ವಿ.ಹಿಂ.ಪ.ಪ್ರಸಾರ ಪ್ರಚಾರ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಪ್ರಶಾಂತ್ ಕೊಕ್ಕಡ ಸಹ ಸಂಯೋಜಕರು ಬಜರಂಗದಳ‌ ಬೆಳ್ತಂಗಡಿ ಪ್ರಖಂಡ, ಅಶೋಕ್ ಕಳೆಂಜ ಸತ್ಸಂಗ ಪ್ರಮುಖ್ ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ, ವಿನೋದ್ ಮದ್ದಡ್ಕ ಸೇವಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ, ಶ್ರೀಮತಿ ಕಾವ್ಯ ಬೆಳ್ತಂಗಡಿ ಮಾತೃಮಂಡಳಿ ಬೆಳ್ತಂಗಡಿ ಪ್ರಖಂಡ, ತಿಮ್ಮಪ್ಪ ಗೌಡ ಬೆಳಾಲು, ಸೀತಾರಾಮ್ ಬೆಳಾಲ್ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದ.ಕನ್ನಡ. ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ ಸಮಾವೇಶ: ಬೆಳ್ತಂಗಡಿ ತಾಲೂಕಿನಾದ್ಯಂತದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

Suddi Udaya
error: Content is protected !!