September 6, 2026
ಕೃಷಿ

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೂರು ದಿನಗಳ ಕಾಲ ನಡೆದ ಮೀನು ಮೇಳ ಸಂಪನ್ನ

ಬೆಳ್ತಂಗಡಿ : ಆ 12 ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನಗಳ ಕಾಲ ನಡೆದ ಮೀನು ಮೇಳಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು ಅಭಿನಂದನೆ ಸ್ವೀಕರಿಸಿದರು . ಈ ಸಂದರ್ಭದಲ್ಲಿ ಕಡಮ್ಮಾಜೆ ಫಾರ್ಮ್ಸ್ ನಾ ಕುಸುಮ ದಿನಕರ ಗೌಡ ಕಡಮ್ಮಾಜೆ , ಸಹೋದರರಾದ ದೇವಿಪ್ರಸಾದ ಗೌಡ, ಜಯಪ್ರಸಾದ ಗೌಡ ಕಡಮ್ಮಾಜೆ, ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ. ಬಂದಾರು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ , ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರ್,ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ಸುದೆಪ್ಪಿಲ, ಹಾಗೂ ವಿವಿಧ ಜವಾಬ್ದಾರಿ ನಿರ್ವಹಿಸಿದ ಸ್ವಯಂ ಸೇವಕರು ಉಪಸ್ಥಿತರಿದ್ದರು, ಹಲವಾರು ಪ್ರಮುಖರು ಭೇಟಿ ನೀಡಿ ಶುಭಹಾರೈಸಿದರು, ಕೇದುತ್ತ ಮೀನಿನ ಅಟಿಲ್ದ ಕಮ್ಮೆನ ಸವಿದು ಮೆಚ್ಚುಗೆ ಹಂಚಿಕೊಂಡರು. ಮೂರು ದಿನದ ಮೀನು ಮೇಳದಲ್ಲಿ ತಿಲಾಪಿಯ ಮೀನು,ಮಡೆoಜಿ ಮೀನು,ಫoಗಾಸಿಯಸ್ ಮೀನು,ರೂಪ್ ಚಂದ್ ಮೀನುಗಳ ಖಾದ್ಯ ನೀರ್ ದೋಸೆ, ಆಪ, ಊಟ ದೊಂದಿಗೆ ಸವಿಯಲು ಕೆದುತ್ತ ಮೀನ್ ಅಡಿಪಿಲ್ದ ಅಟಿಲ್ ನಲ್ಲಿತ್ತು .ಇದರ ಜೊತೆಗೆ ಮೀನು ಮರಿಗಳು ಲಭ್ಯವಿತ್ತು ಇದರೊಂದಿಗೆ ಎಸ್.ಆರ್.ಕೆ ಮಿಷನರಿ ಲ್ಯಾಡರ್ಸ್, ನೇತ್ರಾವತಿ ನರ್ಸರಿ, ದೇಸಿ ತರಕಾರಿ ಸಸಿ ಮತ್ತು ಬೀಜ, ಟ್ರೀ ಸೈಕ್ಲಿoಗ್, ಜೇನು ಮತ್ತು ಜೀನಿನ ಪರಿಕರಗಳು, ವಿವಿಧ ಅಕ್ವೆರಿಯಂ ಮೀನು ಸಾಮಗ್ರಿ, ಇಕೋ ಫ್ರೆಶ್ ಎಂಟರ್ ಪ್ರೈಸೆಸ್, ಸಚಿನ್ ಸ್ವೀಟ್ಸ್ & ಸ್ವೀಟ್ ಸೆಂಟರ್ ಮಳಿಗೆಗಳು ಒಂದೇ ಸೂರಿನಡಿಯಲ್ಲಿದೆ.
ವಿಶೇಷ ಆಕರ್ಷಣೆಯಾಗಿ ಮೀನಿಗೆ ಗಾಲ ಹಾಕುವ ಸ್ಪರ್ಧೆ, ಮಡೆoಜಿ ಮೀನು ಹಿಡಿಯುವ ಸ್ಪರ್ಧೆ ಜನ ಮನಸೂರೆಗೊಂಡಿತು.ಸಾವಿರಾರು ಜನರು ಭೇಟಿ ನೀಡಿದರು.
ವಿಜಯ ಕಡ್ತಿಲ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya
error: Content is protected !!