25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

ವೇಣೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ವೇಣೂರು ಬಜಿರೆ ಪಿ ಎಂ ಶ್ರೀ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಆ.11 ರಂದು ಶ್ರಮದಾನವನ್ನು ನಡೆಸಲಾಯಿತು.

ಶ್ರಮದಾನದಲ್ಲಿ ಶಾಲೆಯ ಸುತ್ತಮುತ್ತ ಹಣ್ಣು ಗಿಡ ನಾಟಿ ಮಾಡಲಾಯಿತು. ಕೆಲವು ಗಿಡ ಮರಗಳ ಬುಡಕ್ಕೆ ಸೊಪ್ಪು ಹಾಕುವ ಕೆಲಸ ಮಾಡಲಾಯಿತು.

ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರು ಭಾಗವಹಿಸಿದರು. ತಾಲೂಕಿನ ಕೃಷಿ ಅಧಿಕಾರಿ ಕೃಷ್ಣ ಹಾಗೂ ವಲಯದ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರಿಗೆ ಶಾಲೆಯ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಿದರು.

ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲೆಯ ಕಮಿಟಿ ಅಧ್ಯಕ್ಷರಾದ ದಿನೇಶ್ ಪೂಜಾರಿ ಧನ್ಯವಾದ ಸಲ್ಲಿಸಿದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!