25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.


2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24 ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.


2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya
error: Content is protected !!