25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.


2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24 ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.


2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Related posts

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!