30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

ಕೊಕ್ಕಡ : ಸೆಲ್ಕೋ ಫೌಂಡೇಶನ್, ಬೆಂಗಳೂರು ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇದರ ಯೋಜನೆಯಡಿಯಲ್ಲಿ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಆ.13 ರಂದು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ನ ಡಿ.ಜಿ.ಎಮ್ ಗುರುಪ್ರಕಾಶ್ ಶೆಟ್ಟಿ ಸಾಂಕೇತಿಕವಾಗಿ ಸೋಲಾರ್ ಪೆನಲ್ ಅನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಅವರಿಗೆ ಹಸ್ತಾಂತರಿಸಿದರು.

ಗುರುಪ್ರಕಾಶ್ ಶೆಟ್ಟಿ ಇವರು ಬಡ ಜನರನ್ನು ತಲುಪುವಲ್ಲಿ ಸೆಲ್ಕೋ ಮಹತ್ವದ ಪಾತ್ರವನ್ನು ಹೊಂದಿದೆ. ಸೋಲಾರ್ ಅನ್ನು ಜೀವನೋಪಾಯದ ಕಡೆಗೆ ವಿಸ್ತರಿಸುವ ಬಗ್ಗೆ ಉದ್ದೇಶವನ್ನು ಹೊಂದಿದ್ದು 18 ಜೀವನೋಪಾಯದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದೆ ಮತ್ತು ಎಲ್ಲಾ ದಿವ್ಯಾಂಗರು ಇದರ ಸದುಪಯೋಗವನ್ನು ಪಡೆದುಕೊಂಡು ನೆಮ್ಮದಿಯ ಬಾಳನ್ನು ಬದುಕು ಬೇಕು ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಕಾರ್ಯದರ್ಶಿ ರೊ| ಸಂದೇಶ್ ಕುಮಾರ್ ರಾವ್, ಕೊಕ್ಕಡ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಕೃಷ್ಣ ಭಟ್, ಸೆಲ್ಕೋ ಏರಿಯಾ ಮ್ಯಾನೇಜರ್ ಸಂಜಿತ್ ರೈ ಮತ್ತು ಬೆಳ್ತಂಗಡಿಯ ಬ್ರಾಂಚ್ ಮ್ಯಾನೇಜರ್ ನವೀನ್ ಕುಮಾರ್ ಜಿ. ನೆರಿಯ, ಹಾಗೂ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಶಾಂತಾ ಪಿ ಶೆಟ್ಟಿ, ಉಪಸ್ಥಿತರಿದ್ದರು.

ಡಿ.ಜಿ.ಎಮ್ ಸೆಲ್ಕೋ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗುರುಪ್ರಕಾಶ್ ಶೆಟ್ಟಿ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಕಾರ್ಯದರ್ಶಿಯಾಗಿರುವ ರೊ| ಸಂದೇಶ್ ರಾವ್ ಇವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು.

ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಯ 25 ಮಂದಿ ಅರ್ಹ ಫಲಾನುಭವಿಗಳಿಗೆ 1 ಫ್ಯಾನ್, 1 ಬಲ್ಬ್, 2 ಸೋಲಾರ್ ಪೆನಾಲ್, 2 ಬ್ಯಾಟರಿ ಮತ್ತು ಇನ್ವರ್ಟರ್ ತಲಾ ರೂ. 65,000/- ಮೊತ್ತದ ಸೋಲಾರ್ ಕಿಟ್ ಗಳನ್ನು ಫಲಾನುಭವಿಗಳ ಮನೆಗಳಲ್ಲಿ ಅಳವಡಿಸಲಾಗಿದೆ.

ಸೇವಾಧಾಮ ಸಂಸ್ಥಾಪಕರಾದ ಕೆ. ವಿನಾಯಕ ರಾವ್ ಪ್ರಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂಟಿಂಗ್ ಸಂಯೋಜಕರಾದ ಕು| ಸುಮ ನಿರೂಪಿಸಿ, ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ಧನ್ಯವಾದವಿತ್ತರು.

Related posts

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!