September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುಳು ಆಚರಣೆಗಳ ವೈಚಾರಿಕತೆ ಮತ್ತು ವೈಜ್ಞಾನಿಕ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲು ವರ್ಷದ 12 ತಿಂಗಳಲ್ಲಿ ಆಟಿ ಅದರದೇ ಆದ ಮಹತ್ವ ಹೊಂದಿದ್ದು, ಆಟಿ ಅಮಾವಾಸ್ಯೆ,, ನಾಗರ ಪಂಚಮಿ ಹಬ್ಬಗಳು ಮತ್ತು ಆಟಿ ಕಲೆಂಜದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ಪ್ರಾಚಾರ್ಯ ಮೋಹನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಗ್ರಾಮಪಂಚಾಯತ್ ಸದಸ್ಯೆ ಶ್ರೀಮತಿ ಹೇಮಾವತಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಛಮೆ, ಬಂಟ್ವಾಳ ನ್ಯಾಯಾಲಯದ ಎ ಪಿ ಪಿ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ಪ್ರಮಿತ, ಕವಿತಾ, ನಿಶ್ಮಿತಾ ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ,ಸಮಾಜ ಶಾಸ್ತ್ರ ಉಪನ್ಯಾಸಕ ಮಾಯಿಲ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಆ.31: ಉಜಿರೆಯಲ್ಲಿ ಸಾರಥಿ ಮೋಟಾ‌ರ್ ಲಿಂಕ್ಸ್ & ಹೊಗೆ ತಪಾಸಣಾ ಕೇಂದ್ರ ಶುಭಾರಂಭ

Suddi Udaya
error: Content is protected !!