23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುಳು ಆಚರಣೆಗಳ ವೈಚಾರಿಕತೆ ಮತ್ತು ವೈಜ್ಞಾನಿಕ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲು ವರ್ಷದ 12 ತಿಂಗಳಲ್ಲಿ ಆಟಿ ಅದರದೇ ಆದ ಮಹತ್ವ ಹೊಂದಿದ್ದು, ಆಟಿ ಅಮಾವಾಸ್ಯೆ,, ನಾಗರ ಪಂಚಮಿ ಹಬ್ಬಗಳು ಮತ್ತು ಆಟಿ ಕಲೆಂಜದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ಪ್ರಾಚಾರ್ಯ ಮೋಹನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಗ್ರಾಮಪಂಚಾಯತ್ ಸದಸ್ಯೆ ಶ್ರೀಮತಿ ಹೇಮಾವತಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಛಮೆ, ಬಂಟ್ವಾಳ ನ್ಯಾಯಾಲಯದ ಎ ಪಿ ಪಿ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ಪ್ರಮಿತ, ಕವಿತಾ, ನಿಶ್ಮಿತಾ ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ,ಸಮಾಜ ಶಾಸ್ತ್ರ ಉಪನ್ಯಾಸಕ ಮಾಯಿಲ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya
error: Content is protected !!