25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

ಆಗುತ್ತಿರುವ ಕುರಿತು.

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ/ಪ್ರಮುಖ ಕಾಯಿಲೆಗಳ ಚಿಕಿತ್ಸಾ ವೆಚ್ಚ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದಲ್ಲಿ ಈಗ ಸಿಗುತ್ತಿರುವ ಸಹಾಯಧನಗಳು ತೀರಾ ಅತ್ಯಲ್ಪ ಹಾಗೂ ನಗಣ್ಯವಾಗಿವೆ. ಅಲ್ಲದೇ ಪ್ರಸ್ತುತ ಚಾಲ್ತಿಯಲ್ಲಿರುವ ಮಂಜೂರಾತಿ ವಿಧಾನ ಹಾಗೂ ಆಸ್ಪತ್ರೆ ವೆಚ್ಚಕ್ಕೆ ಹೋಲಿಸಿದರೆ ಮರುಪಾವತಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತೀರಾ ಅತ್ಯಲ್ಪ ಮೊತ್ತ ಬಂದಿರುವುದರಿಂದ ಬಾಧಿತನಾಗುವ ಕಾರ್ಮಿಕನಿಗೆ ಯೋಜನೆಯ ಪ್ರಯೋಜನಗಳು ಪೂರ್ಣ ಪ್ರಮಾಣದಲ್ಲಿ ಲಭಿಸುತ್ತಿಲ್ಲ. ಚಿಕಿತ್ಸಾ ವೆಚ್ಚದ ಸಹಾಯಧನಕ್ಕೆ ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿ, ಅರ್ಜಿ ಸಲ್ಲಿಸಲು ಕಾರ್ಮಿಕರಿಗೆ ತುಂಬಾ ಓಡಾಟ, ಸಮಯ ಮತ್ತು ಹಣ ಬೇಕಾಗುತ್ತದೆ. ಆದುದ್ದರಿಂದ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ನಗದು ರಹಿತ ಸೇವೆಯ ಮೂಲಕ ಪೂರ್ಣ ಪ್ರಮಾಣದಲ್ಲಿ ಕಾರ್ಮಿಕರಿಗೆ ಲಭಿಸುವಂತೆ ಕ್ರಮ ವಹಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಕಟ್ಟಡ ಮಂಡಳಿಯಲ್ಲಿ ಇದೀಗ ರಾಜ್ಯದಾದ್ಯಂತ ಕಾರ್ಮಿಕರ ಹಾಗೂ ಅವರ ಅವಲಂಬಿತರ ಹೆಲ್ತ್ ಚೆಕಪ್ ಕ್ಯಾಂಪ್‌ಗಳನ್ನು ನಡೆಸುತ್ತಿದ್ದು, ಒಬ್ಬರ ಚೆಕಪ್‌ಗೆ 2,940/- ರೂಪಾಯಿಯನ್ನು ಕಟ್ಟಡ ಮಂಡಳಿಯು ಟೆಂಡರ್ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೀಡುತ್ತಿದ್ದು, ಈ ಕಾಟಾಚಾರದ ಹೆಲ್ತ್ ಚೆಕಪ್ ಕ್ಯಾಂಪ್‌ಗಳಿಂದ ಕಾರ್ಮಿಕರಿಗಾಗಲಿ ಹಾಗೂ ಅವಲಂಬಿತರಿಗಾಗಲಿ ಯಾವುದೇ ಪ್ರಯೋಜನಗಳು ಆಗುತ್ತಿಲ್ಲ. ಕಟ್ಟಡ ಮಂಡಳಿಯಲ್ಲಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಬಳಕೆಯಾಗಬೇಕಾದ ಹಣವು ಈ ರೀತಿಯ ಅನಾವಶ್ಯಕ ಯೋಜನೆಯಿಂದ ಬರಿದಾಗುತ್ತಿದೆ. ಆದುದ್ದರಿಂದ ಈ ಕುರಿತು ಮರುವಿಮರ್ಶೆ ಮಾಡಿ ಕಾರ್ಮಿಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಕ್ರಮ ವಹಿಸಬೇಕಾದ ತುರ್ತು ಅಗತ್ಯವಿದೆ. ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿ ಅಪಘಾತವಾದ ನಂತರ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಆದರೇ ಇದೀಗ ಮಂಡಳಿಯಲ್ಲಿ ಅಪಘಾತ ಪರಿಹಾರ ಮತ್ತು ಪಿಂಚಣಿಯು ಅಪಘಾತದ ನಂತರದ ವಿಶ್ರಾಂತಿಯ ಸಮಯದಲ್ಲಿ ದೊರೆಯುತ್ತಿಲ್ಲ. ಈ ಸಂಬಂಧಿತ ನಿಯಮಾವಳಿಗಳಿಗೆ ಸೂಕ್ತ ಬದಲಾವಣೆ ತರಬೇಕಾಗಿದೆ. ಅಲ್ಲದೇ ಕಾರ್ಮಿಕರು ಮರಣವಾದ ನಂತರ ಅವರ ಅವಲಂಬಿತ ಮಕ್ಕಳಿಗೆ ವಿದ್ಯಾರ್ಥಿ ವೇತನವಾಗಲಿ ಹಾಗೂ ಪತ್ನಿಗೆ ವಿಧವಾ ವೇತನವಾಗಲಿ ಸಿಗುತ್ತಿಲ್ಲ. ಈ ಕುರಿತು ಕೂಡಲೇ ಕ್ರಮ ವಹಿಸಬೇಕಾದ ಅನಿವಾರ್ಯತೆ ಇದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

Related posts

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!