24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುಳು ಆಚರಣೆಗಳ ವೈಚಾರಿಕತೆ ಮತ್ತು ವೈಜ್ಞಾನಿಕ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲು ವರ್ಷದ 12 ತಿಂಗಳಲ್ಲಿ ಆಟಿ ಅದರದೇ ಆದ ಮಹತ್ವ ಹೊಂದಿದ್ದು, ಆಟಿ ಅಮಾವಾಸ್ಯೆ,, ನಾಗರ ಪಂಚಮಿ ಹಬ್ಬಗಳು ಮತ್ತು ಆಟಿ ಕಲೆಂಜದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ಪ್ರಾಚಾರ್ಯ ಮೋಹನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಗ್ರಾಮಪಂಚಾಯತ್ ಸದಸ್ಯೆ ಶ್ರೀಮತಿ ಹೇಮಾವತಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಛಮೆ, ಬಂಟ್ವಾಳ ನ್ಯಾಯಾಲಯದ ಎ ಪಿ ಪಿ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ಪ್ರಮಿತ, ಕವಿತಾ, ನಿಶ್ಮಿತಾ ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ,ಸಮಾಜ ಶಾಸ್ತ್ರ ಉಪನ್ಯಾಸಕ ಮಾಯಿಲ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಕೋಲ್ಕತ್ತಾದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya
error: Content is protected !!