ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶುಭಲಕ್ಷ್ಮಿ ಮೂಡುಬಿದ್ರೆ ಪೌಷ್ಟಿಕ ಆಹಾರ ಹಾಗೂ ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಯಶೋಧ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರು ಹಾಜರಿದ್ದರು. ಪವಿತ್ರ ಕೇಂದ್ರದ ಸಂಯೋಜಕಿ ಪ್ರತಿಭಾ, ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಫೆಳ್ಸಿಟಾ ಸ್ವಾಗತಿಸಿದರು. ಅಮರಾಜ್ಯೋತಿ ಕೇಂದ್ರದ ಸಂಯೋಜಕಿ ಸವಿತಾ ಪಿರೇರಾ ಕಾರ್ಯಕ್ರಮ ತಯಾರಿ ನಡೆಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಧನ್ಯವಾದವಿತ್ತರು.

Leave a Comment

error: Content is protected !!