April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.10 ರಂದು ನಮ್ಮ ಮನೆ ಹವ್ಯಕ ಭವನದ ವಠಾರದಲ್ಲಿ ನಡೆಯಿತು.

ದೀಪ ಪ್ರಜ್ವಲನೆಯ ಮೂಲಕ ನಡೆದ ಕಾರ್ಯಕ್ರಮದಲ್ಲಿ, ಶಿಶು ಮಂದಿರ ಮಂದಿರದ ಮಾಜಿ ಕಾರ್ಯದರ್ಶಿ, ಶ್ರೀಮತಿ ಸುಧಾಮಣಿಯವರು ಆಟಿ ತಿಂಗಳ ವಿಶೇಷತೆ ಮತ್ತು ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಮಂದಿರದ ಅಧ್ಯಕ್ಷ ಇಂದುಮತಿಯವರು ಕಳೆದ ನಾಲ್ಕು ವರ್ಷದಿಂದ ನಡೆಸುತ್ತಿರುವ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ, ಮಾತೆಯರಿಗೆ ಮತ್ತು ಮಕ್ಕಳಿಗೆ ಹಲವಾರು ಮನರಂಜಾನ ಆಟಗಳನ್ನು ನಡೆಸಿಕೊಡಲಾಯಿತು.

ವೇದಿಕೆಯಲ್ಲಿ ಶಿಶುಮಂದಿರದ ಮಾತೃ ಮಂಡಳಿಯ ಅಧ್ಯಕ್ಷ ಸುಪ್ರಿಯಾ ಶೆಟ್ಟಿ ಉಪಸ್ಥಿತರಿದ್ದು, ಮಾತೆಯರು ಮಾಡಿಕೊಂಡು ಬಂದ ಸುಮಾರು 32 ವಿಧದ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ವಿವರವನ್ನು ಓದಿದರು. ಶಿಶುಮಂದಿರದ ಕೋಶಾಧಿಕಾರಿ ಪ್ರಿಯದರ್ಶಿನಿ ಸುವರ್ಣ, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ, ಬಾಲಕೃಷ್ಣ, ಶೈಲಜಾ, ಮಾತಾಜಿಗಳಾದ ಅಶ್ವಿನಿ ಮತ್ತು ಜಯಶ್ರೀ, ಪ್ರಕಾಶ್ ಕಾಮತ್ ಸಹಕರಿಸಿದರು.

ಮಾತೃ ಮಂಡಳಿಯ ಕಾರ್ಯದರ್ಶಿ ಸ್ವಾತಿ ಕಾರ್ಯಕ್ರಮ ನಿರೂಪಿಸಿ, ಮಾತೃ ಮಂಡಳಿಯ ಜೊತೆ ಕಾರ್ಯದರ್ಶಿ ಸಂಧ್ಯಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಬಾಲಗೋಕೂಲ ಮಕ್ಕಳು ಮತ್ತು ಅವರ ಪೋಷಕರು ಹಾಜರಿದ್ದರು. ಇಂದುಮತಿ ಧನ್ಯವಾದವಿತ್ತರು.

Related posts

ಉಜಿರೆ ಎರ್ನೋಡಿಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya
error: Content is protected !!