July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.10 ರಂದು ನಮ್ಮ ಮನೆ ಹವ್ಯಕ ಭವನದ ವಠಾರದಲ್ಲಿ ನಡೆಯಿತು.

ದೀಪ ಪ್ರಜ್ವಲನೆಯ ಮೂಲಕ ನಡೆದ ಕಾರ್ಯಕ್ರಮದಲ್ಲಿ, ಶಿಶು ಮಂದಿರ ಮಂದಿರದ ಮಾಜಿ ಕಾರ್ಯದರ್ಶಿ, ಶ್ರೀಮತಿ ಸುಧಾಮಣಿಯವರು ಆಟಿ ತಿಂಗಳ ವಿಶೇಷತೆ ಮತ್ತು ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಮಂದಿರದ ಅಧ್ಯಕ್ಷ ಇಂದುಮತಿಯವರು ಕಳೆದ ನಾಲ್ಕು ವರ್ಷದಿಂದ ನಡೆಸುತ್ತಿರುವ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ, ಮಾತೆಯರಿಗೆ ಮತ್ತು ಮಕ್ಕಳಿಗೆ ಹಲವಾರು ಮನರಂಜಾನ ಆಟಗಳನ್ನು ನಡೆಸಿಕೊಡಲಾಯಿತು.

ವೇದಿಕೆಯಲ್ಲಿ ಶಿಶುಮಂದಿರದ ಮಾತೃ ಮಂಡಳಿಯ ಅಧ್ಯಕ್ಷ ಸುಪ್ರಿಯಾ ಶೆಟ್ಟಿ ಉಪಸ್ಥಿತರಿದ್ದು, ಮಾತೆಯರು ಮಾಡಿಕೊಂಡು ಬಂದ ಸುಮಾರು 32 ವಿಧದ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ವಿವರವನ್ನು ಓದಿದರು. ಶಿಶುಮಂದಿರದ ಕೋಶಾಧಿಕಾರಿ ಪ್ರಿಯದರ್ಶಿನಿ ಸುವರ್ಣ, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ, ಬಾಲಕೃಷ್ಣ, ಶೈಲಜಾ, ಮಾತಾಜಿಗಳಾದ ಅಶ್ವಿನಿ ಮತ್ತು ಜಯಶ್ರೀ, ಪ್ರಕಾಶ್ ಕಾಮತ್ ಸಹಕರಿಸಿದರು.

ಮಾತೃ ಮಂಡಳಿಯ ಕಾರ್ಯದರ್ಶಿ ಸ್ವಾತಿ ಕಾರ್ಯಕ್ರಮ ನಿರೂಪಿಸಿ, ಮಾತೃ ಮಂಡಳಿಯ ಜೊತೆ ಕಾರ್ಯದರ್ಶಿ ಸಂಧ್ಯಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಬಾಲಗೋಕೂಲ ಮಕ್ಕಳು ಮತ್ತು ಅವರ ಪೋಷಕರು ಹಾಜರಿದ್ದರು. ಇಂದುಮತಿ ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸೌರ ಯುಗಾದಿ ವಿಷು ಆಚರಣೆ

Suddi Udaya
error: Content is protected !!