24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಸುಬ್ರಮಣ್ಯ ದೇವಾಲಯದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಗುರುತಿಸಿದ ಸಾರ್ವಜನಿಕರು, ಸ್ಥಳೀಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು ಇವರಿಗೆ ದೂರವಾಣಿ ಮುಖಾಂತರ ಮಾಹಿತಿಯನ್ನು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅವರು ವಿಷಯದ ಗಂಭೀರತೆಯನ್ನು ಅರಿತು ಸುಬ್ರಮಣ್ಯ ಠಾಣೆಗೆ ತೆರಳಿ ಠಾಣಾಧಿಕಾರಿಗಳಿಗೆ ತಿಳಿಸಿರುತ್ತಾರೆ.

ಮಹಿಳಾ ಪೇದೆ, ಪುನೀತ ಇವರನ್ನು ಸ್ಥಳಕ್ಕೆ ಕಳಿಹಿಸಿಕೊಟ್ಟು ಠಾಣಾಧಿಕಾರಿಗಳು ಸಂಬಂಧ ಪಟ್ಟ ಮಹಿಳೆಯನ್ನು ವಿಚಾರಿಸಿ,ಈಕೆ ಮೈಸೂರು ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮದಲ್ಲಿ ವಾಸ್ತವ್ಯ ಇರುವ ಮಹಿಳೆಯೆಂದು ಗುರುತಿಸಿ, ಮಹಿಳಾಪೇದೆ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಕರೆ ಮಾಡಿ ಈಕೆಯ ಮಾಹಿತಿಯನ್ನು ಕಲೆ ಹಾಕಿದಾಗ ಈಕೆ ಸುಮಾರು 15 ವರ್ಷಗಳಿಂದ ತನ್ನೂರನ್ನು ತೊರೆದು ಅನೇಕ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ.ಈಕೆಯ ಸಂಬಂಧಿಕರು ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ವಾಸ್ತವ್ಯ ಇರುವುದನ್ನು ಪತ್ತೆ ಹಚ್ಚಿದ್ದು ಈಕೆಯನ್ನು ಸುಬ್ರಹ್ಮಣ್ಯದಿಂದ ತನ್ನೂರಿಗೆ ಬಸ್ಸನ್ನು ಏರಿಸಿ ಕಳುಹಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು, ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಗಳು ಮತ್ತು ಮಹಿಳಾ ಸಿಬ್ಬಂದಿ, ಸುಬ್ರಮಣ್ಯ ದೇವಳದ ಭದ್ರತಾ ಸಿಬ್ಬಂದಿ ರವೀಶ್ ಕೋಡ್ತಗುಳಿ, ಪುಟ್ಟಣ್ಣ ವಾಲಗದಕೇರಿ,ಆಪತ್ಭಾಂದವ ದೀಪಕ್ ಯುವ ತೇಜಸ್ವು ಸುಬ್ರಹ್ಮಣ್ಯ ಇವರು ಸಹಕರಿಸಿದ್ದಾರೆ.

Related posts

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!