April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಸುಬ್ರಮಣ್ಯ ದೇವಾಲಯದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಗುರುತಿಸಿದ ಸಾರ್ವಜನಿಕರು, ಸ್ಥಳೀಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು ಇವರಿಗೆ ದೂರವಾಣಿ ಮುಖಾಂತರ ಮಾಹಿತಿಯನ್ನು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅವರು ವಿಷಯದ ಗಂಭೀರತೆಯನ್ನು ಅರಿತು ಸುಬ್ರಮಣ್ಯ ಠಾಣೆಗೆ ತೆರಳಿ ಠಾಣಾಧಿಕಾರಿಗಳಿಗೆ ತಿಳಿಸಿರುತ್ತಾರೆ.

ಮಹಿಳಾ ಪೇದೆ, ಪುನೀತ ಇವರನ್ನು ಸ್ಥಳಕ್ಕೆ ಕಳಿಹಿಸಿಕೊಟ್ಟು ಠಾಣಾಧಿಕಾರಿಗಳು ಸಂಬಂಧ ಪಟ್ಟ ಮಹಿಳೆಯನ್ನು ವಿಚಾರಿಸಿ,ಈಕೆ ಮೈಸೂರು ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮದಲ್ಲಿ ವಾಸ್ತವ್ಯ ಇರುವ ಮಹಿಳೆಯೆಂದು ಗುರುತಿಸಿ, ಮಹಿಳಾಪೇದೆ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಕರೆ ಮಾಡಿ ಈಕೆಯ ಮಾಹಿತಿಯನ್ನು ಕಲೆ ಹಾಕಿದಾಗ ಈಕೆ ಸುಮಾರು 15 ವರ್ಷಗಳಿಂದ ತನ್ನೂರನ್ನು ತೊರೆದು ಅನೇಕ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ.ಈಕೆಯ ಸಂಬಂಧಿಕರು ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ವಾಸ್ತವ್ಯ ಇರುವುದನ್ನು ಪತ್ತೆ ಹಚ್ಚಿದ್ದು ಈಕೆಯನ್ನು ಸುಬ್ರಹ್ಮಣ್ಯದಿಂದ ತನ್ನೂರಿಗೆ ಬಸ್ಸನ್ನು ಏರಿಸಿ ಕಳುಹಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು, ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಗಳು ಮತ್ತು ಮಹಿಳಾ ಸಿಬ್ಬಂದಿ, ಸುಬ್ರಮಣ್ಯ ದೇವಳದ ಭದ್ರತಾ ಸಿಬ್ಬಂದಿ ರವೀಶ್ ಕೋಡ್ತಗುಳಿ, ಪುಟ್ಟಣ್ಣ ವಾಲಗದಕೇರಿ,ಆಪತ್ಭಾಂದವ ದೀಪಕ್ ಯುವ ತೇಜಸ್ವು ಸುಬ್ರಹ್ಮಣ್ಯ ಇವರು ಸಹಕರಿಸಿದ್ದಾರೆ.

Related posts

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!