25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಸುಬ್ರಮಣ್ಯ ದೇವಾಲಯದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಗುರುತಿಸಿದ ಸಾರ್ವಜನಿಕರು, ಸ್ಥಳೀಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು ಇವರಿಗೆ ದೂರವಾಣಿ ಮುಖಾಂತರ ಮಾಹಿತಿಯನ್ನು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅವರು ವಿಷಯದ ಗಂಭೀರತೆಯನ್ನು ಅರಿತು ಸುಬ್ರಮಣ್ಯ ಠಾಣೆಗೆ ತೆರಳಿ ಠಾಣಾಧಿಕಾರಿಗಳಿಗೆ ತಿಳಿಸಿರುತ್ತಾರೆ.

ಮಹಿಳಾ ಪೇದೆ, ಪುನೀತ ಇವರನ್ನು ಸ್ಥಳಕ್ಕೆ ಕಳಿಹಿಸಿಕೊಟ್ಟು ಠಾಣಾಧಿಕಾರಿಗಳು ಸಂಬಂಧ ಪಟ್ಟ ಮಹಿಳೆಯನ್ನು ವಿಚಾರಿಸಿ,ಈಕೆ ಮೈಸೂರು ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮದಲ್ಲಿ ವಾಸ್ತವ್ಯ ಇರುವ ಮಹಿಳೆಯೆಂದು ಗುರುತಿಸಿ, ಮಹಿಳಾಪೇದೆ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಕರೆ ಮಾಡಿ ಈಕೆಯ ಮಾಹಿತಿಯನ್ನು ಕಲೆ ಹಾಕಿದಾಗ ಈಕೆ ಸುಮಾರು 15 ವರ್ಷಗಳಿಂದ ತನ್ನೂರನ್ನು ತೊರೆದು ಅನೇಕ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ.ಈಕೆಯ ಸಂಬಂಧಿಕರು ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ವಾಸ್ತವ್ಯ ಇರುವುದನ್ನು ಪತ್ತೆ ಹಚ್ಚಿದ್ದು ಈಕೆಯನ್ನು ಸುಬ್ರಹ್ಮಣ್ಯದಿಂದ ತನ್ನೂರಿಗೆ ಬಸ್ಸನ್ನು ಏರಿಸಿ ಕಳುಹಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು, ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಗಳು ಮತ್ತು ಮಹಿಳಾ ಸಿಬ್ಬಂದಿ, ಸುಬ್ರಮಣ್ಯ ದೇವಳದ ಭದ್ರತಾ ಸಿಬ್ಬಂದಿ ರವೀಶ್ ಕೋಡ್ತಗುಳಿ, ಪುಟ್ಟಣ್ಣ ವಾಲಗದಕೇರಿ,ಆಪತ್ಭಾಂದವ ದೀಪಕ್ ಯುವ ತೇಜಸ್ವು ಸುಬ್ರಹ್ಮಣ್ಯ ಇವರು ಸಹಕರಿಸಿದ್ದಾರೆ.

Related posts

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya
error: Content is protected !!