ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.10 ರಂದು ನಮ್ಮ ಮನೆ ಹವ್ಯಕ ಭವನದ ವಠಾರದಲ್ಲಿ ನಡೆಯಿತು.

ದೀಪ ಪ್ರಜ್ವಲನೆಯ ಮೂಲಕ ನಡೆದ ಕಾರ್ಯಕ್ರಮದಲ್ಲಿ, ಶಿಶು ಮಂದಿರ ಮಂದಿರದ ಮಾಜಿ ಕಾರ್ಯದರ್ಶಿ, ಶ್ರೀಮತಿ ಸುಧಾಮಣಿಯವರು ಆಟಿ ತಿಂಗಳ ವಿಶೇಷತೆ ಮತ್ತು ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಮಂದಿರದ ಅಧ್ಯಕ್ಷ ಇಂದುಮತಿಯವರು ಕಳೆದ ನಾಲ್ಕು ವರ್ಷದಿಂದ ನಡೆಸುತ್ತಿರುವ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ, ಮಾತೆಯರಿಗೆ ಮತ್ತು ಮಕ್ಕಳಿಗೆ ಹಲವಾರು ಮನರಂಜಾನ ಆಟಗಳನ್ನು ನಡೆಸಿಕೊಡಲಾಯಿತು.

ವೇದಿಕೆಯಲ್ಲಿ ಶಿಶುಮಂದಿರದ ಮಾತೃ ಮಂಡಳಿಯ ಅಧ್ಯಕ್ಷ ಸುಪ್ರಿಯಾ ಶೆಟ್ಟಿ ಉಪಸ್ಥಿತರಿದ್ದು, ಮಾತೆಯರು ಮಾಡಿಕೊಂಡು ಬಂದ ಸುಮಾರು 32 ವಿಧದ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ವಿವರವನ್ನು ಓದಿದರು. ಶಿಶುಮಂದಿರದ ಕೋಶಾಧಿಕಾರಿ ಪ್ರಿಯದರ್ಶಿನಿ ಸುವರ್ಣ, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ, ಬಾಲಕೃಷ್ಣ, ಶೈಲಜಾ, ಮಾತಾಜಿಗಳಾದ ಅಶ್ವಿನಿ ಮತ್ತು ಜಯಶ್ರೀ, ಪ್ರಕಾಶ್ ಕಾಮತ್ ಸಹಕರಿಸಿದರು.

ಮಾತೃ ಮಂಡಳಿಯ ಕಾರ್ಯದರ್ಶಿ ಸ್ವಾತಿ ಕಾರ್ಯಕ್ರಮ ನಿರೂಪಿಸಿ, ಮಾತೃ ಮಂಡಳಿಯ ಜೊತೆ ಕಾರ್ಯದರ್ಶಿ ಸಂಧ್ಯಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಬಾಲಗೋಕೂಲ ಮಕ್ಕಳು ಮತ್ತು ಅವರ ಪೋಷಕರು ಹಾಜರಿದ್ದರು. ಇಂದುಮತಿ ಧನ್ಯವಾದವಿತ್ತರು.

Related posts

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ಗೆಜ್ಜೆಗಿರಿಯಲ್ಲಿ ಆಯುರ್ವೇದಿಕ್ ಕೇಂದ್ರ ಕಾಮಗಾರಿ ಪ್ರಗತಿ ಕುರಿತು ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಚರ್ಚೆ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!