25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.10 ರಂದು ನಮ್ಮ ಮನೆ ಹವ್ಯಕ ಭವನದ ವಠಾರದಲ್ಲಿ ನಡೆಯಿತು.

ದೀಪ ಪ್ರಜ್ವಲನೆಯ ಮೂಲಕ ನಡೆದ ಕಾರ್ಯಕ್ರಮದಲ್ಲಿ, ಶಿಶು ಮಂದಿರ ಮಂದಿರದ ಮಾಜಿ ಕಾರ್ಯದರ್ಶಿ, ಶ್ರೀಮತಿ ಸುಧಾಮಣಿಯವರು ಆಟಿ ತಿಂಗಳ ವಿಶೇಷತೆ ಮತ್ತು ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಮಂದಿರದ ಅಧ್ಯಕ್ಷ ಇಂದುಮತಿಯವರು ಕಳೆದ ನಾಲ್ಕು ವರ್ಷದಿಂದ ನಡೆಸುತ್ತಿರುವ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ, ಮಾತೆಯರಿಗೆ ಮತ್ತು ಮಕ್ಕಳಿಗೆ ಹಲವಾರು ಮನರಂಜಾನ ಆಟಗಳನ್ನು ನಡೆಸಿಕೊಡಲಾಯಿತು.

ವೇದಿಕೆಯಲ್ಲಿ ಶಿಶುಮಂದಿರದ ಮಾತೃ ಮಂಡಳಿಯ ಅಧ್ಯಕ್ಷ ಸುಪ್ರಿಯಾ ಶೆಟ್ಟಿ ಉಪಸ್ಥಿತರಿದ್ದು, ಮಾತೆಯರು ಮಾಡಿಕೊಂಡು ಬಂದ ಸುಮಾರು 32 ವಿಧದ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ವಿವರವನ್ನು ಓದಿದರು. ಶಿಶುಮಂದಿರದ ಕೋಶಾಧಿಕಾರಿ ಪ್ರಿಯದರ್ಶಿನಿ ಸುವರ್ಣ, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ, ಬಾಲಕೃಷ್ಣ, ಶೈಲಜಾ, ಮಾತಾಜಿಗಳಾದ ಅಶ್ವಿನಿ ಮತ್ತು ಜಯಶ್ರೀ, ಪ್ರಕಾಶ್ ಕಾಮತ್ ಸಹಕರಿಸಿದರು.

ಮಾತೃ ಮಂಡಳಿಯ ಕಾರ್ಯದರ್ಶಿ ಸ್ವಾತಿ ಕಾರ್ಯಕ್ರಮ ನಿರೂಪಿಸಿ, ಮಾತೃ ಮಂಡಳಿಯ ಜೊತೆ ಕಾರ್ಯದರ್ಶಿ ಸಂಧ್ಯಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಬಾಲಗೋಕೂಲ ಮಕ್ಕಳು ಮತ್ತು ಅವರ ಪೋಷಕರು ಹಾಜರಿದ್ದರು. ಇಂದುಮತಿ ಧನ್ಯವಾದವಿತ್ತರು.

Related posts

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ನವೀಕೃತ ಕೈಗಾರಿಕಾ ಸಮಗ್ರ ವಿದ್ಯುತ್ ಕಾರ್ಯಗಾರ ಕೇಂದ್ರಕ್ಕೆ ಚಾಲನೆ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya
error: Content is protected !!