23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ.10 ರಂದು ನಮ್ಮ ಮನೆ ಹವ್ಯಕ ಭವನದ ವಠಾರದಲ್ಲಿ ನಡೆಯಿತು.

ದೀಪ ಪ್ರಜ್ವಲನೆಯ ಮೂಲಕ ನಡೆದ ಕಾರ್ಯಕ್ರಮದಲ್ಲಿ, ಶಿಶು ಮಂದಿರ ಮಂದಿರದ ಮಾಜಿ ಕಾರ್ಯದರ್ಶಿ, ಶ್ರೀಮತಿ ಸುಧಾಮಣಿಯವರು ಆಟಿ ತಿಂಗಳ ವಿಶೇಷತೆ ಮತ್ತು ಆಟಿ ತಿಂಗಳಲ್ಲಿ ಮಾಡುವ ತಿಂಡಿ ತಿನಿಸುಗಳ ಮಹತ್ವದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಶು ಮಂದಿರದ ಅಧ್ಯಕ್ಷ ಇಂದುಮತಿಯವರು ಕಳೆದ ನಾಲ್ಕು ವರ್ಷದಿಂದ ನಡೆಸುತ್ತಿರುವ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ, ಮಾತೆಯರಿಗೆ ಮತ್ತು ಮಕ್ಕಳಿಗೆ ಹಲವಾರು ಮನರಂಜಾನ ಆಟಗಳನ್ನು ನಡೆಸಿಕೊಡಲಾಯಿತು.

ವೇದಿಕೆಯಲ್ಲಿ ಶಿಶುಮಂದಿರದ ಮಾತೃ ಮಂಡಳಿಯ ಅಧ್ಯಕ್ಷ ಸುಪ್ರಿಯಾ ಶೆಟ್ಟಿ ಉಪಸ್ಥಿತರಿದ್ದು, ಮಾತೆಯರು ಮಾಡಿಕೊಂಡು ಬಂದ ಸುಮಾರು 32 ವಿಧದ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ವಿವರವನ್ನು ಓದಿದರು. ಶಿಶುಮಂದಿರದ ಕೋಶಾಧಿಕಾರಿ ಪ್ರಿಯದರ್ಶಿನಿ ಸುವರ್ಣ, ಸೋಮಶೇಖರ್ ದೇವಸ್ಯ, ರಾಮಚಂದ್ರ ಶೆಟ್ಟಿ, ಬಾಲಕೃಷ್ಣ, ಶೈಲಜಾ, ಮಾತಾಜಿಗಳಾದ ಅಶ್ವಿನಿ ಮತ್ತು ಜಯಶ್ರೀ, ಪ್ರಕಾಶ್ ಕಾಮತ್ ಸಹಕರಿಸಿದರು.

ಮಾತೃ ಮಂಡಳಿಯ ಕಾರ್ಯದರ್ಶಿ ಸ್ವಾತಿ ಕಾರ್ಯಕ್ರಮ ನಿರೂಪಿಸಿ, ಮಾತೃ ಮಂಡಳಿಯ ಜೊತೆ ಕಾರ್ಯದರ್ಶಿ ಸಂಧ್ಯಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಬಾಲಗೋಕೂಲ ಮಕ್ಕಳು ಮತ್ತು ಅವರ ಪೋಷಕರು ಹಾಜರಿದ್ದರು. ಇಂದುಮತಿ ಧನ್ಯವಾದವಿತ್ತರು.

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಾನಪದ ಸ್ಫರ್ಧಾಕೂಟ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದ ಗರ್ಡಾಡಿ, ಪಡಂಗಡಿ ಗ್ರಾಮಗಳ ಗ್ರಾಮ ಸಮಿತಿ ರಚನೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!