23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

ಬೆಳ್ತಂಗಡಿ:ಸುಬ್ರಮಣ್ಯ ದೇವಾಲಯದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಗುರುತಿಸಿದ ಸಾರ್ವಜನಿಕರು, ಸ್ಥಳೀಯ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು ಇವರಿಗೆ ದೂರವಾಣಿ ಮುಖಾಂತರ ಮಾಹಿತಿಯನ್ನು ನೀಡಿದ್ದು,ಸ್ಥಳಕ್ಕೆ ಆಗಮಿಸಿದ ಅವರು ವಿಷಯದ ಗಂಭೀರತೆಯನ್ನು ಅರಿತು ಸುಬ್ರಮಣ್ಯ ಠಾಣೆಗೆ ತೆರಳಿ ಠಾಣಾಧಿಕಾರಿಗಳಿಗೆ ತಿಳಿಸಿರುತ್ತಾರೆ.

ಮಹಿಳಾ ಪೇದೆ, ಪುನೀತ ಇವರನ್ನು ಸ್ಥಳಕ್ಕೆ ಕಳಿಹಿಸಿಕೊಟ್ಟು ಠಾಣಾಧಿಕಾರಿಗಳು ಸಂಬಂಧ ಪಟ್ಟ ಮಹಿಳೆಯನ್ನು ವಿಚಾರಿಸಿ,ಈಕೆ ಮೈಸೂರು ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮದಲ್ಲಿ ವಾಸ್ತವ್ಯ ಇರುವ ಮಹಿಳೆಯೆಂದು ಗುರುತಿಸಿ, ಮಹಿಳಾಪೇದೆ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಕರೆ ಮಾಡಿ ಈಕೆಯ ಮಾಹಿತಿಯನ್ನು ಕಲೆ ಹಾಕಿದಾಗ ಈಕೆ ಸುಮಾರು 15 ವರ್ಷಗಳಿಂದ ತನ್ನೂರನ್ನು ತೊರೆದು ಅನೇಕ ಕಡೆಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ.ಈಕೆಯ ಸಂಬಂಧಿಕರು ಸ್ಥಳೀಯ ಠಾಣಾ ವ್ಯಾಪ್ತಿಯಲ್ಲಿ ವಾಸ್ತವ್ಯ ಇರುವುದನ್ನು ಪತ್ತೆ ಹಚ್ಚಿದ್ದು ಈಕೆಯನ್ನು ಸುಬ್ರಹ್ಮಣ್ಯದಿಂದ ತನ್ನೂರಿಗೆ ಬಸ್ಸನ್ನು ಏರಿಸಿ ಕಳುಹಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ರವಿ ಕಕ್ಕೆಪದವು, ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿಗಳು ಮತ್ತು ಮಹಿಳಾ ಸಿಬ್ಬಂದಿ, ಸುಬ್ರಮಣ್ಯ ದೇವಳದ ಭದ್ರತಾ ಸಿಬ್ಬಂದಿ ರವೀಶ್ ಕೋಡ್ತಗುಳಿ, ಪುಟ್ಟಣ್ಣ ವಾಲಗದಕೇರಿ,ಆಪತ್ಭಾಂದವ ದೀಪಕ್ ಯುವ ತೇಜಸ್ವು ಸುಬ್ರಹ್ಮಣ್ಯ ಇವರು ಸಹಕರಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!