ನಾರಾವಿ :ಸಂತ ಅಂತೋನಿ ಪದವಿಪೂರ್ವ ಕಾಲೇಜು ನಾರಾವಿ ಇಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸಂಕಲ್ಪ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ವo. ಡಾ. ಆಲ್ವಿನ್ ಸೆರಾವೋ ಪ್ರತಿಜ್ಞಾವಿಧಿ ಬೋಧಿಸಿದರು. ಪದವಿಪೂರ್ವ ಕಾಲೇಜಿನ ಉಪಪ್ರಾoಶುಪಾಲರಾದ ರಿಚರ್ಡ್ ಮೋರಸ್, ಉಪನ್ಯಾಸಕರಾದ ಶ್ರೀಮತಿ ಜ್ಯೋತಿ ಹೆಗ್ಡೆ, ಶ್ರೀಮತಿ ಚೈತ್ರಾ, ಶ್ರೀಮತಿ ಅನಿತಾ ಡಿ ಸೋಜ, ಕು. ಅಶ್ವಿತಾ ಸೆರಾವೋ, ಕು.ರಾಜೇಶ್ವರಿ, ಪದವಿ ಕಾಲೇಜಿನ ಉಪಪ್ರಾoಶುಪಾಲರಾದ ಸಂತೋಷ್ ಸಲ್ದಾನ, ಎನ್ ಎಸ್ ಎಸ್ ಕಾರ್ಯಕ್ರಮ ಯೋಜನಾಧಿಕಾರಿಗಳಾದ ದಿನೇಶ್ ಬಿ. ಕೆ ಬಳoಜ, ಗ್ರಂಥಪಾಲಕರಾದ ಪ್ರಕಾಶ್ ಅಳಿಯೂರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.