25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ , ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಛೇರಿವರೆಗೆ ಕಾಲ್ನಡಿಗೆ ಜಾಥಾಕ್ಕೆ ತಾಲೂಕಿನ ದಂಡಾಧಿಕಾರಿಯವರಾದ ಪೃಥ್ವಿ ಸಾನಿಕಮ್ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಯವರಾದ ಭವಾನಿಶಂಕರ್ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಚೇರಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ನಾಳೆ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ,ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ ಎಂದರು.

ಜಾಥಾ ನಡೆದ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಮಕ್ಕಳು,ಶಾಲಾ ಶಿಕ್ಷಕರು,ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!