July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

ಉಜಿರೆಯ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ತರಬೆತುದರರಾಗಿ ಚೆವರು ವಿನೋದ, ಜಿಲ್ಲಾ ಸಹಾಯಕ ಆಯುಕ್ತರು, ಕಾಸರಗೋಡು ಇವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ವಿಭಾಗದ ‘ನಿಪುನ್ ‘ ಪರೀಕ್ಷೆಗೆ ಬೇಕಾದ ವಿವಿಧ ಕೌಶಲ್ಯಗಳನ್ನು ಹಾಗೂ ಪೂರ್ವ ಸಿದ್ಧತಾ ತಯಾರಿಕೆಗಳ ಬಗ್ಗೆ ಸಮಗ್ರ ತರಬೇತಿಯನ್ನೂ ನೀಡುತ್ತಿದ್ದಾರೆ.


ಇದಕ್ಕೂ ಮೊದಲು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಬಿರವನ್ನು ಉದ್ಘಾಟಸಿ ಮಾತನಾಡಿದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಸ್ಕೌಟ್ ಎಂಬುದು ಒಂದು ನಿಸ್ವಾರ್ಥ ಸೇವಾ ಸಂಸ್ಥೆಯಾಗಿದ್ದು ಯಾವುದೇ ಫಲಪೇಕ್ಷೆ ಇಲ್ಲದೇ, ಯಾವುದೇ ಪ್ರಚಾರ ಬಯಸದೇ ಸೇವೆಯೇ ಪರಮ ಧರ್ಮ ಎಂಬ ತತ್ವದಡಿ ಕಾರ್ಯ ನಿರ್ವಹಿಸುತ್ತಿರುವುದು ತುಂಬಾ ಶ್ಲಾಘನೀಯ ಎಂದು ನುಡಿದು ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.


ವೇದಿಕೆಯ ಮೇಲೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಂ ಕೆ ಉಪಸ್ಥಿತರಿದ್ದರು.
ರೋವರ್ ವಿಕ್ರಮ್ ಸರ್ವರನ್ನು ಸ್ವಾಗತಿಸಿ, ರೋವರ್ ಪರೀಕ್ಷಿತ್ ವಂದಿಸಿ,ರೆಂಜರ್ ಮೇಘನಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!