April 11, 2025
Uncategorized

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮಂಗಳೂರು :ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್
ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ.
ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.
ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ,ನೀರಜ್ ಕುಂಜರ್ಪ,ಮಿಥುನ್ ರಾಜ್
ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.
ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.
ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya
error: Content is protected !!