24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

ತಾಲೂಕಿನ ಮುಂಚೂಣಿ ಸಹಕಾರಿ ಸಂಸ್ಥೆಯಾದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2023-24 ನೇ ಸಾಲಿನ ಸಂಘದ ಅತ್ಯುತ್ತಮ ಕಾರ್ಯವೈಖರಿ ಹಾಗೂ ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕು ನಿ, ಮಂಗಳೂರು, ಇವರು ನೀಡುವ ಜಿಲ್ಲಾ ಮಟ್ಟದ ದ್ವೀತಿಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ಏಳು ಶಾಖೆಗಳನ್ನು ಹೊಂದಿದ್ದು, 2023-24 ನೇ ಸಾಲಿನಲ್ಲಿ 1020-89 ಕೋಟಿ ವ್ಯವಹಾರ ನಡೆಸಿ 127-11 ಕೋಟಿ ಠೇವಣಿ ಹಾಗೂ 175-02 ಹೊಂದಿದೆ.2023-24 ನೇ ಸಾಲಿನಲ್ಲಿ 4-30ಕೋಟಿ ಲಾಭವನ್ನು ಗಳಿಸಿದೆ. ಕೋಟಿ ಹೊರಬಾಕಿ ಸಾಲವನ್ನು ಪ್ರಶಸ್ತಿ ಪಡೆದ ಸಂಘವನ್ನು ಆ.14 ರಂದು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಸಾಲಿಯಾನ್ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ದಯಾನಂದ ಶೆಟ್ಟಿಗಾರ್ ಇವರನ್ನು ಡಾ.ಎಂ.ಎನ್.ರಾಜೇಂದ್ರ ದ.ಕ.ಜಿ.ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕುಮಾರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಶಶಿಕುಮಾರ್ ರೈ ಹಾಗೂ ದ.ಕ.ಜಿ,ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರು, ಹಾಗೂ ಬಂಗಾಡಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಸಂತ ಗೌಡ, ನಿರ್ದೇಶಕರಾದ ರಮೇಶ್ ಕೆಂಗಾಜೆ, ವಿನಯ ಚಂದ್ರ ಕಿಲ್ಲೂರು, ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಕೆ., ಶ್ರೀಮತಿ ವಿಜಯ, ಸಿಬ್ಬಂದಿಗಳಾದ ಚಂದ್ರಕಾಂತ್ ಗೌಡ, ಬಾಲಕೃಷ್ಣ ಸುವರ್ಣ ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya
error: Content is protected !!