September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಉಜಿರೆ: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. 

ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಆಚರಣೆ ಮಾತ್ರ ಆಗಿರದೆ ಪಾಲಿಸಿಕೊಂಡು ಬರಬೇಕು” ಎಂದು ತಿಳಿಸಿದರು 

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಇವರು “ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚು ಸೂಕ್ತ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕ   ಜಯರಾಮ ಮಯ್ಯ “ನಮ್ಮ ಸಂಸ್ಕೃತಿಯ ಅರಿವನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ” ಎಂದು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರಾದ ರವಿಚಂದ್ರ ಜೈನ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ ಮತ್ತು ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ದೀಕ್ಷಿತಾ ಸ್ವಾಗತಿಸಿ, ತ್ರಿಷಾ ಜೈನ್  ವಂದಿಸಿದ ಈ ಕಾರ್ಯಕ್ರಮವನ್ನು ಯೋಗಿತಾ ನಿರೂಪಿಸಿದರು

Related posts

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya
error: Content is protected !!