25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು ಹಲವು ವರ್ಷಗಳಿಂದ ವಿಶ್ರಾಂತಿಯಲ್ಲೇ ಇದ್ದರಾದರೂ ರವಿವಾರ ಹಠಾತ್ ಹೃದಯ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಮರ್‌ಹೂಮ್ ಕಾಜೂರು ಜಮಲುಲ್ಲೈಲಿ ತಂಙಳ್ ಅವರ ಅನೇಕ ವರ್ಷ ನಿಕಟವರ್ತಿ ಮತ್ತು ಸೇವಕರಾಗಿದ್ದ ಅವರು ಮುಂಡಾಜೆ “ಮಸ್ಲಕ್” ಸಮಿತಿಯ ಸ್ಥಾಪಕಲ್ಲೊರ್ವರು‌ ಹಾಗೂ ಪ್ರಸ್ತುತ ಸಂಚಾಲಕರಾಗಿದ್ದರು. ಕೃಷಿಕರಾಗಿದ್ದ ಅವರು ಕನ್ಯಾಡಿ 2 ಇಲ್ಲಿ ಕೃಷಿ ತೋಟದ ಮೇಲ್ವಿಚಾರಕರಾಗಿ ದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇದರ ಆಡಳಿತ ಸಮಿತಿಯಲ್ಲೂ ಹಲವು ವರ್ಷ ಸೇವೆ ಸಲ್ಲಿಸಿದ್ದು ಮಸೀದಿಯ ಆರಂಭಿಕ ದಾಖಲೆ ಪತ್ರಗಳು ಸರಿಪಡಿಸುವಲ್ಲಿ ತಮ್ಮ ಸೇವೆ ನೀಡಿದ್ದರು.

ಮೃತರು ಪತ್ನಿ, ಐವರು ಪುತ್ರರು ,‌ ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya
error: Content is protected !!