25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಸುಲ್ಕೇರಿಯಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರ ಭೇಟಿ ಕಾರ್ಯಕ್ರಮ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!