July 23, 2026
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ಗುರುವಾಯನಕೆರೆ ವಿಕಾಸ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.189 ಕೋಟಿ ವಾರ್ಷಿಕ ವ್ಯವಹಾರ,ರೂ.23 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ -8 ಸ್ಥಾನ, ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಗಳಿಗೆ-4 ಸ್ಥಾನ

Suddi Udaya
error: Content is protected !!