September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!