September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.

ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.

ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ,ನೀರಜ್ ಕುಂಜರ್ಪ,ಮಿಥುನ್ ರಾಜ್, ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.

ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya
error: Content is protected !!