April 2, 2025
ತಾಲೂಕು ಸುದ್ದಿ

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ , ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಛೇರಿವರೆಗೆ ಕಾಲ್ನಡಿಗೆ ಜಾಥಾಕ್ಕೆ ತಾಲೂಕಿನ ದಂಡಾಧಿಕಾರಿಯವರಾದ ಪೃಥ್ವಿ ಸಾನಿಕಮ್ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಯವರಾದ ಭವಾನಿಶಂಕರ್ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಚೇರಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ನಾಳೆ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ,ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ ಎಂದರು.

ಜಾಥಾ ನಡೆದ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಮಕ್ಕಳು,ಶಾಲಾ ಶಿಕ್ಷಕರು,ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!