22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ , ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಛೇರಿವರೆಗೆ ಕಾಲ್ನಡಿಗೆ ಜಾಥಾಕ್ಕೆ ತಾಲೂಕಿನ ದಂಡಾಧಿಕಾರಿಯವರಾದ ಪೃಥ್ವಿ ಸಾನಿಕಮ್ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಯವರಾದ ಭವಾನಿಶಂಕರ್ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಚೇರಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ನಾಳೆ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ,ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ ಎಂದರು.

ಜಾಥಾ ನಡೆದ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಮಕ್ಕಳು,ಶಾಲಾ ಶಿಕ್ಷಕರು,ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya
error: Content is protected !!