23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

ಉಜಿರೆಯ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ತರಬೆತುದರರಾಗಿ ಚೆವರು ವಿನೋದ, ಜಿಲ್ಲಾ ಸಹಾಯಕ ಆಯುಕ್ತರು, ಕಾಸರಗೋಡು ಇವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ವಿಭಾಗದ ‘ನಿಪುನ್ ‘ ಪರೀಕ್ಷೆಗೆ ಬೇಕಾದ ವಿವಿಧ ಕೌಶಲ್ಯಗಳನ್ನು ಹಾಗೂ ಪೂರ್ವ ಸಿದ್ಧತಾ ತಯಾರಿಕೆಗಳ ಬಗ್ಗೆ ಸಮಗ್ರ ತರಬೇತಿಯನ್ನೂ ನೀಡುತ್ತಿದ್ದಾರೆ.


ಇದಕ್ಕೂ ಮೊದಲು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಬಿರವನ್ನು ಉದ್ಘಾಟಸಿ ಮಾತನಾಡಿದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಸ್ಕೌಟ್ ಎಂಬುದು ಒಂದು ನಿಸ್ವಾರ್ಥ ಸೇವಾ ಸಂಸ್ಥೆಯಾಗಿದ್ದು ಯಾವುದೇ ಫಲಪೇಕ್ಷೆ ಇಲ್ಲದೇ, ಯಾವುದೇ ಪ್ರಚಾರ ಬಯಸದೇ ಸೇವೆಯೇ ಪರಮ ಧರ್ಮ ಎಂಬ ತತ್ವದಡಿ ಕಾರ್ಯ ನಿರ್ವಹಿಸುತ್ತಿರುವುದು ತುಂಬಾ ಶ್ಲಾಘನೀಯ ಎಂದು ನುಡಿದು ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.


ವೇದಿಕೆಯ ಮೇಲೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಂ ಕೆ ಉಪಸ್ಥಿತರಿದ್ದರು.
ರೋವರ್ ವಿಕ್ರಮ್ ಸರ್ವರನ್ನು ಸ್ವಾಗತಿಸಿ, ರೋವರ್ ಪರೀಕ್ಷಿತ್ ವಂದಿಸಿ,ರೆಂಜರ್ ಮೇಘನಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಶ್ರೀ ರಾಮಕ್ಷೇತ್ರದಲ್ಲಿ 63ನೇ ವರ್ಷದ ಶ್ರೀರಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಂದಾದೀಪವನ್ನು ಬೆಳಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!