23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮಂಗಳೂರು :ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್
ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ.
ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.
ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ,ನೀರಜ್ ಕುಂಜರ್ಪ,ಮಿಥುನ್ ರಾಜ್
ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.
ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.
ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ಹತ್ಯಡ್ಕ ನಿವಾಸಿ ಯಮುನಾ ನಿಧನ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!