September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

ತಾಲೂಕಿನ ಮುಂಚೂಣಿ ಸಹಕಾರಿ ಸಂಸ್ಥೆಯಾದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2023-24 ನೇ ಸಾಲಿನ ಸಂಘದ ಅತ್ಯುತ್ತಮ ಕಾರ್ಯವೈಖರಿ ಹಾಗೂ ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕು ನಿ, ಮಂಗಳೂರು, ಇವರು ನೀಡುವ ಜಿಲ್ಲಾ ಮಟ್ಟದ ದ್ವೀತಿಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ಏಳು ಶಾಖೆಗಳನ್ನು ಹೊಂದಿದ್ದು, 2023-24 ನೇ ಸಾಲಿನಲ್ಲಿ 1020-89 ಕೋಟಿ ವ್ಯವಹಾರ ನಡೆಸಿ 127-11 ಕೋಟಿ ಠೇವಣಿ ಹಾಗೂ 175-02 ಹೊಂದಿದೆ.2023-24 ನೇ ಸಾಲಿನಲ್ಲಿ 4-30ಕೋಟಿ ಲಾಭವನ್ನು ಗಳಿಸಿದೆ. ಕೋಟಿ ಹೊರಬಾಕಿ ಸಾಲವನ್ನು ಪ್ರಶಸ್ತಿ ಪಡೆದ ಸಂಘವನ್ನು ಆ.14 ರಂದು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಸಾಲಿಯಾನ್ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ದಯಾನಂದ ಶೆಟ್ಟಿಗಾರ್ ಇವರನ್ನು ಡಾ.ಎಂ.ಎನ್.ರಾಜೇಂದ್ರ ದ.ಕ.ಜಿ.ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕುಮಾರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಶಶಿಕುಮಾರ್ ರೈ ಹಾಗೂ ದ.ಕ.ಜಿ,ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರು, ಹಾಗೂ ಬಂಗಾಡಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಸಂತ ಗೌಡ, ನಿರ್ದೇಶಕರಾದ ರಮೇಶ್ ಕೆಂಗಾಜೆ, ವಿನಯ ಚಂದ್ರ ಕಿಲ್ಲೂರು, ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಕೆ., ಶ್ರೀಮತಿ ವಿಜಯ, ಸಿಬ್ಬಂದಿಗಳಾದ ಚಂದ್ರಕಾಂತ್ ಗೌಡ, ಬಾಲಕೃಷ್ಣ ಸುವರ್ಣ ಉಪಸ್ಥಿತರಿದ್ದರು.

Related posts

ವೇಣೂರು ಮಹಾಲಿಂಗೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಅನ್ನಛತ್ರಕ್ಕೆ ಶಂಕುಸ್ಥಾಪನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!