23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಉಜಿರೆ: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. 

ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಆಚರಣೆ ಮಾತ್ರ ಆಗಿರದೆ ಪಾಲಿಸಿಕೊಂಡು ಬರಬೇಕು” ಎಂದು ತಿಳಿಸಿದರು 

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಇವರು “ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚು ಸೂಕ್ತ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕ   ಜಯರಾಮ ಮಯ್ಯ “ನಮ್ಮ ಸಂಸ್ಕೃತಿಯ ಅರಿವನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ” ಎಂದು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರಾದ ರವಿಚಂದ್ರ ಜೈನ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ ಮತ್ತು ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ದೀಕ್ಷಿತಾ ಸ್ವಾಗತಿಸಿ, ತ್ರಿಷಾ ಜೈನ್  ವಂದಿಸಿದ ಈ ಕಾರ್ಯಕ್ರಮವನ್ನು ಯೋಗಿತಾ ನಿರೂಪಿಸಿದರು

Related posts

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya
error: Content is protected !!