ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ತಂತಿ ನೆಲಕ್ಕೆ ತಾಗಿ ಕೊಂಡಿದೆ. ಪಕ್ಕದ ಕಿರಣ್ ಪೇರಲ್ದಪಲಿಕೆ ಅವರ ಅಡಿಕೆ ಕೃಷಿಗೂ ಅಪಾರ ಹಾನಿಯಾಗಿದ್ದು, ಭಾಗದ ರಸ್ತೆ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಸ್ಥಳಕ್ಕೆ ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್ ಅವರು ಭೇಟಿ ನೀಡಿ ಮೆಸ್ಕಾಂ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ರೂ.3ಕೋಟಿ25 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!