30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು ಹಲವು ವರ್ಷಗಳಿಂದ ವಿಶ್ರಾಂತಿಯಲ್ಲೇ ಇದ್ದರಾದರೂ ರವಿವಾರ ಹಠಾತ್ ಹೃದಯ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಮರ್‌ಹೂಮ್ ಕಾಜೂರು ಜಮಲುಲ್ಲೈಲಿ ತಂಙಳ್ ಅವರ ಅನೇಕ ವರ್ಷ ನಿಕಟವರ್ತಿ ಮತ್ತು ಸೇವಕರಾಗಿದ್ದ ಅವರು ಮುಂಡಾಜೆ “ಮಸ್ಲಕ್” ಸಮಿತಿಯ ಸ್ಥಾಪಕಲ್ಲೊರ್ವರು‌ ಹಾಗೂ ಪ್ರಸ್ತುತ ಸಂಚಾಲಕರಾಗಿದ್ದರು. ಕೃಷಿಕರಾಗಿದ್ದ ಅವರು ಕನ್ಯಾಡಿ 2 ಇಲ್ಲಿ ಕೃಷಿ ತೋಟದ ಮೇಲ್ವಿಚಾರಕರಾಗಿ ದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇದರ ಆಡಳಿತ ಸಮಿತಿಯಲ್ಲೂ ಹಲವು ವರ್ಷ ಸೇವೆ ಸಲ್ಲಿಸಿದ್ದು ಮಸೀದಿಯ ಆರಂಭಿಕ ದಾಖಲೆ ಪತ್ರಗಳು ಸರಿಪಡಿಸುವಲ್ಲಿ ತಮ್ಮ ಸೇವೆ ನೀಡಿದ್ದರು.

ಮೃತರು ಪತ್ನಿ, ಐವರು ಪುತ್ರರು ,‌ ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ನಿಡಿಗಲ್ ನಲ್ಲಿ ಪಿಕಪ್ ವಾಹನ ಟಿಪ್ಪರ್ ಗೆ ಬಡಿದು ಬಳಿಕ ನೇತ್ರಾವತಿ ಸೇತುವೆಯ ತಡೆಗೋಡೆಗೆ ಡಿಕ್ಕಿ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!