22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು ಹಲವು ವರ್ಷಗಳಿಂದ ವಿಶ್ರಾಂತಿಯಲ್ಲೇ ಇದ್ದರಾದರೂ ರವಿವಾರ ಹಠಾತ್ ಹೃದಯ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಮರ್‌ಹೂಮ್ ಕಾಜೂರು ಜಮಲುಲ್ಲೈಲಿ ತಂಙಳ್ ಅವರ ಅನೇಕ ವರ್ಷ ನಿಕಟವರ್ತಿ ಮತ್ತು ಸೇವಕರಾಗಿದ್ದ ಅವರು ಮುಂಡಾಜೆ “ಮಸ್ಲಕ್” ಸಮಿತಿಯ ಸ್ಥಾಪಕಲ್ಲೊರ್ವರು‌ ಹಾಗೂ ಪ್ರಸ್ತುತ ಸಂಚಾಲಕರಾಗಿದ್ದರು. ಕೃಷಿಕರಾಗಿದ್ದ ಅವರು ಕನ್ಯಾಡಿ 2 ಇಲ್ಲಿ ಕೃಷಿ ತೋಟದ ಮೇಲ್ವಿಚಾರಕರಾಗಿ ದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇದರ ಆಡಳಿತ ಸಮಿತಿಯಲ್ಲೂ ಹಲವು ವರ್ಷ ಸೇವೆ ಸಲ್ಲಿಸಿದ್ದು ಮಸೀದಿಯ ಆರಂಭಿಕ ದಾಖಲೆ ಪತ್ರಗಳು ಸರಿಪಡಿಸುವಲ್ಲಿ ತಮ್ಮ ಸೇವೆ ನೀಡಿದ್ದರು.

ಮೃತರು ಪತ್ನಿ, ಐವರು ಪುತ್ರರು ,‌ ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya
error: Content is protected !!