24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು ಹಲವು ವರ್ಷಗಳಿಂದ ವಿಶ್ರಾಂತಿಯಲ್ಲೇ ಇದ್ದರಾದರೂ ರವಿವಾರ ಹಠಾತ್ ಹೃದಯ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಮರ್‌ಹೂಮ್ ಕಾಜೂರು ಜಮಲುಲ್ಲೈಲಿ ತಂಙಳ್ ಅವರ ಅನೇಕ ವರ್ಷ ನಿಕಟವರ್ತಿ ಮತ್ತು ಸೇವಕರಾಗಿದ್ದ ಅವರು ಮುಂಡಾಜೆ “ಮಸ್ಲಕ್” ಸಮಿತಿಯ ಸ್ಥಾಪಕಲ್ಲೊರ್ವರು‌ ಹಾಗೂ ಪ್ರಸ್ತುತ ಸಂಚಾಲಕರಾಗಿದ್ದರು. ಕೃಷಿಕರಾಗಿದ್ದ ಅವರು ಕನ್ಯಾಡಿ 2 ಇಲ್ಲಿ ಕೃಷಿ ತೋಟದ ಮೇಲ್ವಿಚಾರಕರಾಗಿ ದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇದರ ಆಡಳಿತ ಸಮಿತಿಯಲ್ಲೂ ಹಲವು ವರ್ಷ ಸೇವೆ ಸಲ್ಲಿಸಿದ್ದು ಮಸೀದಿಯ ಆರಂಭಿಕ ದಾಖಲೆ ಪತ್ರಗಳು ಸರಿಪಡಿಸುವಲ್ಲಿ ತಮ್ಮ ಸೇವೆ ನೀಡಿದ್ದರು.

ಮೃತರು ಪತ್ನಿ, ಐವರು ಪುತ್ರರು ,‌ ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya
error: Content is protected !!