25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು ಹಲವು ವರ್ಷಗಳಿಂದ ವಿಶ್ರಾಂತಿಯಲ್ಲೇ ಇದ್ದರಾದರೂ ರವಿವಾರ ಹಠಾತ್ ಹೃದಯ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಮರ್‌ಹೂಮ್ ಕಾಜೂರು ಜಮಲುಲ್ಲೈಲಿ ತಂಙಳ್ ಅವರ ಅನೇಕ ವರ್ಷ ನಿಕಟವರ್ತಿ ಮತ್ತು ಸೇವಕರಾಗಿದ್ದ ಅವರು ಮುಂಡಾಜೆ “ಮಸ್ಲಕ್” ಸಮಿತಿಯ ಸ್ಥಾಪಕಲ್ಲೊರ್ವರು‌ ಹಾಗೂ ಪ್ರಸ್ತುತ ಸಂಚಾಲಕರಾಗಿದ್ದರು. ಕೃಷಿಕರಾಗಿದ್ದ ಅವರು ಕನ್ಯಾಡಿ 2 ಇಲ್ಲಿ ಕೃಷಿ ತೋಟದ ಮೇಲ್ವಿಚಾರಕರಾಗಿ ದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇದರ ಆಡಳಿತ ಸಮಿತಿಯಲ್ಲೂ ಹಲವು ವರ್ಷ ಸೇವೆ ಸಲ್ಲಿಸಿದ್ದು ಮಸೀದಿಯ ಆರಂಭಿಕ ದಾಖಲೆ ಪತ್ರಗಳು ಸರಿಪಡಿಸುವಲ್ಲಿ ತಮ್ಮ ಸೇವೆ ನೀಡಿದ್ದರು.

ಮೃತರು ಪತ್ನಿ, ಐವರು ಪುತ್ರರು ,‌ ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಣೆ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಬೆದ್ರಬೆಟ್ಟು ಅರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ಈದುಲ್‌ ಅಝಾ ಆಚರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya
error: Content is protected !!