23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ‘ಶಿಕ್ಷಣದೊಂದಿಗೆ ಗ್ರಂಥಾಲಯವನ್ನು ಬಳಸಿಕೊಂಡಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಸಾಧಿಸಬಹುದು’ ಎಂದರು. ಮುಂಡಾಜೆ ಗ್ರಾಮ ಪಂಚಾಯತಿನ ಗ್ರಂಥಪಾಲಕಿ ಶ್ರೀಮತಿ ಮಮತಾ ಗ್ರಂಥಾಲಯದ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಮಾತನಾಡಿ ‘ಗ್ರಂಥಾಲಯಗಳು ಜ್ಞಾನದ ಭಂಡಾರ, ವ್ಯಕ್ತಿಯ ಜ್ಞಾನವನ್ನು ವಿಸ್ತರಿಸಲು ಗ್ರಂಥಾಲಯವು ಬಹಳ ಉಪಯುಕ್ತ ಮಾಧ್ಯಮವಾಗಿದೆ’ ಎಂದರು.


ವಿದ್ಯಾರ್ಥಿಗಳಾದ ವರ್ಷಾ ಪ್ರಾಸ್ತಾವಿಕ ಮಾತನಾಡಿ, ಕೆ ಎನ್ ಧನುಷ್ ಸ್ವಾಗತಿಸಿ, ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಪೂಜಿತ್ ವಂದಿಸಿದರು.

Related posts

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya
error: Content is protected !!