23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya
error: Content is protected !!