September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya
error: Content is protected !!