ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Leave a Comment

error: Content is protected !!