July 23, 2026
ತಾಲೂಕು ಸುದ್ದಿ

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ , ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಛೇರಿವರೆಗೆ ಕಾಲ್ನಡಿಗೆ ಜಾಥಾಕ್ಕೆ ತಾಲೂಕಿನ ದಂಡಾಧಿಕಾರಿಯವರಾದ ಪೃಥ್ವಿ ಸಾನಿಕಮ್ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಯವರಾದ ಭವಾನಿಶಂಕರ್ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಚೇರಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ನಾಳೆ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ,ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ ಎಂದರು.

ಜಾಥಾ ನಡೆದ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಮಕ್ಕಳು,ಶಾಲಾ ಶಿಕ್ಷಕರು,ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya
error: Content is protected !!