25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಸರ್ಕಾರದ ಆದೇಶದಂತೆ , ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯಿಂದ ಬೆಳ್ತಂಗಡಿ ತಾಲೂಕು ಕಛೇರಿವರೆಗೆ ಕಾಲ್ನಡಿಗೆ ಜಾಥಾಕ್ಕೆ ತಾಲೂಕಿನ ದಂಡಾಧಿಕಾರಿಯವರಾದ ಪೃಥ್ವಿ ಸಾನಿಕಮ್ ಚಾಲನೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಯವರಾದ ಭವಾನಿಶಂಕರ್ ಅವರು ಮಾತನಾಡಿ ಸರ್ಕಾರದ ಆದೇಶದಂತೆ ಹರ್ ಘರ್ ತಿರಂಗಾ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣವನ್ನು ಪ್ರತಿ ಮನೆ ಮನೆಯಲ್ಲಿ, ಕಚೇರಿಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಮಾಡುವುದರ ಮೂಲಕ ದೇಶಕ್ಕಾಗಿ ಮಡಿದ ಸ್ವಾತಂತ್ರ್ಯ ಹೋರಾಟಗಾರರನ್ನು, ಹುತಾತ್ಮರನ್ನು ನೆನಪಿಸಿ ಗೌರವ ಸಲ್ಲಿಸಲಾಗುವುದು. ಆದ್ದರಿಂದ ನಾಳೆ ಆಗಷ್ಟ್ 15ರಂದು ತಮ್ಮ ಮನೆಗಳಲ್ಲಿ,ಕಚೇರಿಗಳಲ್ಲಿ ಧ್ವಜಾರೋಹಣ ಮಾಡಿ ದೇಶಕ್ಕಾಗಿ ಪ್ರಾಣತೆತ್ತವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸೋಣ ಎಂದರು.

ಜಾಥಾ ನಡೆದ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು,ಶಾಲಾ ಮಕ್ಕಳು,ಶಾಲಾ ಶಿಕ್ಷಕರು,ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya
error: Content is protected !!