ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

ಉಜಿರೆಯ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ತರಬೆತುದರರಾಗಿ ಚೆವರು ವಿನೋದ, ಜಿಲ್ಲಾ ಸಹಾಯಕ ಆಯುಕ್ತರು, ಕಾಸರಗೋಡು ಇವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ವಿಭಾಗದ ‘ನಿಪುನ್ ‘ ಪರೀಕ್ಷೆಗೆ ಬೇಕಾದ ವಿವಿಧ ಕೌಶಲ್ಯಗಳನ್ನು ಹಾಗೂ ಪೂರ್ವ ಸಿದ್ಧತಾ ತಯಾರಿಕೆಗಳ ಬಗ್ಗೆ ಸಮಗ್ರ ತರಬೇತಿಯನ್ನೂ ನೀಡುತ್ತಿದ್ದಾರೆ.


ಇದಕ್ಕೂ ಮೊದಲು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಬಿರವನ್ನು ಉದ್ಘಾಟಸಿ ಮಾತನಾಡಿದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಸ್ಕೌಟ್ ಎಂಬುದು ಒಂದು ನಿಸ್ವಾರ್ಥ ಸೇವಾ ಸಂಸ್ಥೆಯಾಗಿದ್ದು ಯಾವುದೇ ಫಲಪೇಕ್ಷೆ ಇಲ್ಲದೇ, ಯಾವುದೇ ಪ್ರಚಾರ ಬಯಸದೇ ಸೇವೆಯೇ ಪರಮ ಧರ್ಮ ಎಂಬ ತತ್ವದಡಿ ಕಾರ್ಯ ನಿರ್ವಹಿಸುತ್ತಿರುವುದು ತುಂಬಾ ಶ್ಲಾಘನೀಯ ಎಂದು ನುಡಿದು ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.


ವೇದಿಕೆಯ ಮೇಲೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಂ ಕೆ ಉಪಸ್ಥಿತರಿದ್ದರು.
ರೋವರ್ ವಿಕ್ರಮ್ ಸರ್ವರನ್ನು ಸ್ವಾಗತಿಸಿ, ರೋವರ್ ಪರೀಕ್ಷಿತ್ ವಂದಿಸಿ,ರೆಂಜರ್ ಮೇಘನಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕಚ್ಚಾವಸ್ತು ಪೂರೈಕೆದಾರರಿಂದ ನಾಗಪುರದಲ್ಲಿ ಪ್ರತಿಭಟನೆ – ರೂ.11.50 ಕೋಟಿ ಪಾವತಿಗೆ ಕಂಪೆನಿ ಒಪ್ಪಿಗೆ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮಾಣಪತ್ರ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya
error: Content is protected !!